ಬಡ ಜನತೆಗೆ ಅನುಕೂಲವಾಗಲೆಂದು ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಇದರ ಕುರಿತ ಸಿಹಿ ಸುದ್ದಿಯೊಂದು ಇಲ್ಲಿದೆ. ವಾರ್ಷಿಕ ಕೆಲಸದ ದಿನಗಳನ್ನು ಈಗ 150 ದಿನಗಳಿಗೆ ಹೆಚ್ಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಈ ವಿಷಯ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನರೇಗಾ ಯೋಜನೆ ಬಲಪಡಿಸಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ವಾರ್ಷಿಕ ಕೆಲಸದ ದಿನಗಳನ್ನು 100 ದಿನಗಳಿಂದ 150 ದಿನಗಳಿಗೆ ಹೆಚ್ಚಿಸಲಾಗಿದ್ದು, ಇದರ ಜೊತೆಗೆ ಕೂಲಿ ದರವನ್ನು 275 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಅಲ್ಲದೆ ಈ ಯೋಜನೆಯಡಿ ಕೆಲಸ ಕೇಳಿಕೊಂಡು ಬರುವ ಎಲ್ಲ ಬಡವರಿಗೂ ಕೆಲಸ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.