ಮೈಸೂರು: ಭಾರತ್ ಬಂದ್ ಹಾಗೂ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಈ ನಡುವೆ ಬಸ್ ಗೆ ಕಾದು ಕಾದು ಸುಸ್ತಾದ ಮಹಿಳೆ ಬಸ್ ನಿಲ್ದಾಣದಲ್ಲೇ ಕುಸಿದು ಬಿದ್ದಿರುವ ಘಟನೆ ಮೈಸೂರು ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬನ್ನೂರಿಗೆ ಹೋಗಲೆಂದು ಮಗಳ ಜೊತೆ ಮೈಸೂರು ಕೇಂದ್ರ ಬಸ್ ನಿಲ್ದಾಣಕ್ಕೆ ಬಂದು, ಬಸ್ ಗಾಗಿ ಮಹಿಳೆ ಕಾಯುತ್ತಿದ್ದರು. ಎಷ್ಟು ಹೊತ್ತಾದರೂ ಬಸ್ ಬಾರದ ಕಾರಣ ಮಹಿಳೆ ಸುಸ್ತಾಗಿ ಕುಸಿದುಬಿದ್ದಿದ್ದಾರೆ.
ಅಸ್ವಸ್ಥಗೊಂಡಿರುವ ಮಹಿಳೆಯನ್ನು ಸಧ್ಯ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.