alex Certify ಬಹುಮತವಿದ್ದರೂ ದಕ್ಕದ ಸ್ಥಾನ: ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುಮತವಿದ್ದರೂ ದಕ್ಕದ ಸ್ಥಾನ: ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಗೆಲ್ಲಲು ಅಗತ್ಯವಿದ್ದ ಸಂಖ್ಯೆಯನ್ನು ಹೊಂದಿದ್ದರೂ ಸಹ ಶಿವಮೊಗ್ಗ ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪರಾಭವಗೊಳ್ಳುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗವಾಗಿದೆ.

ಎಪಿಎಂಸಿಯಲ್ಲಿ ಬಿಜೆಪಿಯ 6 ನಿರ್ದೇಶಕರು ಹಾಗೂ 3 ಮಂದಿ ನಾಮ ನಿರ್ದೇಶಕರಿದ್ದು, ಒಟ್ಟು 9 ಮತಗಳು ಬಿಜೆಪಿ ಅಭ್ಯರ್ಥಿಗಳಿಗೆ ಲಭ್ಯವಾಗಬೇಕಿತ್ತು. ಆದರೆ ಓರ್ವ ನಿರ್ದೇಶಕ ಕೈಕೊಟ್ಟಿರುವ ಕಾರಣ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಬಿ. ಜಗದೀಶ್ ಅವರಿಗೆ 8 ಮತ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಅವರಿಗೆ 8 ಮತ ಲಭಿಸಿವೆ.

ತಲಾ 9 ಮತ ಪಡೆದ ಜೆಡಿಎಸ್ ನ ದುಗ್ಗಪ್ಪ ಗೌಡ ಅಧ್ಯಕ್ಷರಾಗಿ ಹಾಗೂ ಪಕ್ಷೇತರ ಅಭ್ಯರ್ಥಿ ಕುಂಸಿ ಬಾಬು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳಿಗೆ ಕೈಕೊಟ್ಟ ಓರ್ವ ನಿರ್ದೇಶಕ ಯಾರು ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...