alex Certify ಬಾಲಕನ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕನ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು

ಕಲಬುರ್ಗಿ: 14 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಭೀಕರ ಪ್ರಕರಣ ಕಲಬುರ್ಗಿಯ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ.

ಮೃತ ಬಾಲಕನನ್ನು 7ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಇದೀಗ ಜೇವರ್ಗಿಯ ಭೀಮಾನದಿ ದಂಡೆಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ದುಷ್ಕರ್ಮಿಗಳು ಬಾಲಕನಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ ಬಳಿಕ ಆತನ ಮೂಗು ಹಾಗೂ ಮರ್ಮಾಂಗವನ್ನು ಕತ್ತರಿಸಿದ್ದಾರೆ ಅಷ್ಟೇ ಅಲ್ಲ ಮುಖವನ್ನು ಗುದ್ದಿ ಹಲ್ಲುಗಳನ್ನು ಕಿತ್ತುಹಾಕಿ ನರಕಯಾತನೆ ನೀಡಿ ಕೊಲೆ ಮಾಡಿದ್ದಾರೆ. ಬಾಲಕನ ಹತ್ಯೆ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಭೀಮಾನದಿಗೆ ಎಸೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕ ಅನ್ಯ ಕೋಮಿನ ಯುವತಿಯೊಂದಿಗೆ ಸ್ನೇಹದಿಂದ ಇದ್ದುದೇ ಈ ಕೃತ್ಯಕ್ಕೆ ಕಾರಣ ಎಂಬ ಶಂಕೆ ಮೂಡಿದೆ. ಈ ಹಿನ್ನೆಲೆಯಲ್ಲಿ ಯುವತಿಯ ಮನೆಯವರ ವಿರುದ್ಧ ದೂರು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...