ಕೊರೊನಾ ವೈರಸ್ ವಿರುದ್ದ ಇಡೀ ದೇಶ ಹೋರಾಡುತ್ತಿದೆ. ಅದರಲ್ಲೂ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹಗಲಿರುಳೆನ್ನದೆ ಸೋಂಕಿತರ ಶುಶ್ರೂಷೆಯಲ್ಲಿ ತೊಡಗಿದ್ದು, ಆಶಾ ಕಾರ್ಯಕರ್ತೆಯರೂ ಸಹ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ತಲಾ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದ್ದು, ಒಟ್ಟು 40250 ಮಂದಿ ಇದರ ಪ್ರಯೋಜನ ಪಡೆಯಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ಪ್ರಕಟಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.