ಮಹಾಮಾರಿ ಕೊರೊನಾ ಸೋಂಕಿಗೆ ಇನ್ನೂ ಲಸಿಕೆ ಸಿದ್ಧವಾಗಿಲ್ಲದರ ಮಧ್ಯೆ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಮಹತ್ತರ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಕೊರೊನಾ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿಯನ್ನು ಮಾಡಲಾಗಿದ್ದು, ಆತ ಈಗ ಚೇತರಿಸಿಕೊಳ್ಳುತ್ತಿದ್ದಾನೆಂದು ತಿಳಿದುಬಂದಿದೆ.
ಕೊರೊನಾ ಸೋಂಕಿನಿಂದ ಮುಕ್ತಿ ಪಡೆದ ವ್ಯಕ್ತಿಯೊಬ್ಬರಿಂದ ಪ್ಲಾಸ್ಮಾ ಪಡೆದು ಇದನ್ನು ಸೋಂಕು ಪೀಡಿತ ವ್ಯಕ್ತಿಯ ಚಿಕಿತ್ಸೆಗೆ ಬಳಸಿಕೊಳ್ಳಲಾಗಿತ್ತು. ಇದಕ್ಕೆ ಸೋಂಕು ಪೀಡಿತ ಸೂಕ್ತವಾಗಿ ಸ್ಪಂದಿಸಿದ್ದು, ಚೇತರಿಕೆ ಕಂಡಿರುವುದು ಮಹತ್ತರ ಬೆಳವಣಿಗೆಯಾಗಿದೆ.
ಪ್ಲಾಸ್ಮಾ ಥೆರಪಿ ಚಿಕಿತ್ಸೆಗೂ ಮುನ್ನ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿಂದ ಕಿಮ್ಸ್ ವೈದ್ಯರು ಅನುಮತಿ ಪಡೆದಿದ್ದು, ಚಿಕಿತ್ಸೆಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿತ್ತಾದರೂ ಅವರು ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದರು.