alex Certify ಬಿಗ್ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಂಪರ್ಕಿಸಲು ಯತ್ನಿಸಿದ್ದರಾ ಉಮೇಶ್ ಕತ್ತಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಂಪರ್ಕಿಸಲು ಯತ್ನಿಸಿದ್ದರಾ ಉಮೇಶ್ ಕತ್ತಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಭರವಸೆ ನೀಡಿದಂತೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ನೀಡುವುದು ಅನುಮಾನ ಎಂಬುದನ್ನು ಮನಗಂಡಿರುವ ಶಾಸಕ ಉಮೇಶ್ ಕತ್ತಿ ಇದೀಗ ಸಮಾನ ಮನಸ್ಕ ಶಾಸಕರ ಜೊತೆ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ 20ಕ್ಕೂ ಅಧಿಕ ಶಾಸಕರ ಸಭೆ ನಡೆಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಸಮ್ಮತಿಸದಿದ್ದರೆ ಕೈಗೊಳ್ಳಬೇಕಾದ ಮುಂದಿನ ರಾಜಕೀಯ ನಡೆಯ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಂಪರ್ಕಿಸಲು ಉಮೇಶ್ ಕತ್ತಿ ಯತ್ನಿಸಿದ್ದರೆನ್ನಲಾಗಿದ್ದು, ಆದರೆ ಸದ್ಯದ ಪರಿಸ್ಥಿತಿಯಲ್ಲಿ ಉಮೇಶ್ ಕತ್ತಿ ಅವರನ್ನು ಭೇಟಿಯಾಗಲು ಸಿದ್ದರಾಮಯ್ಯ ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣ ಯಾವ ತಿರುವು ಪಡೆಯಲಿದೆ ಎಂಬುದನ್ನು ಆಧರಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...