ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 12 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 210 ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ 48, ಕಲಬುರಗಿ 48, ದಕ್ಷಿಣಕನ್ನಡ 23, ರಾಮನಗರ 21, ಬೆಂಗಳೂರು ನಗರ 17, ಯಾದಗಿರಿ 8, ಮಂಡ್ಯ 7, ಬೀದರ್ 6, ಗದಗ 5, ರಾಯಚೂರು, ಹಾಸನ, ಧಾರವಾಡ ತಲಾ 4 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ದಾವಣಗೆರೆ, ಚಿಕ್ಕಮಗಳೂರು ತಲಾ 3, ವಿಜಯಪುರ, ಉತ್ತರಕನ್ನಡ, ಮೈಸೂರು ತಲಾ 2, ಬಾಗಲಕೋಟೆ, ಶಿವಮೊಗ್ಗ, ಕೊಪ್ಪಳ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.