alex Certify ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ವಿಲೀನ ಪ್ರಶ್ನೆಯೇ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ನಾಯಕತ್ವ ವಿಚಾರದ ಬಗ್ಗೆಯೂ ಎದ್ದಿರುವ ಗೊಂದಲದ ಬಗ್ಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ಮಾತ್ರ ಬಿಜೆಪಿಗೆ ಬೆಂಬಲ ಘೋಷಿಸಿದ್ದರು ಹೊರತು ಜೆಡಿಎಸ್ ಶಾಸಕರು ಬಿಜೆಪಿಗೆ ಬರುವುದಾಗಲಿ, ಜೆಡಿಎಸ್ ನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವ ಪ್ರಶ್ನೆಯಾಗಲಿ ಇಲ್ಲ. ಇಂತಹ ಗೊಂದಲದ ವರದಿಗಳು ಸುಳ್ಳು ಎಂದು ಹೇಳುವ ಮೂಲಕ ಪಕ್ಷಕ್ಕಿಂತ ಮೊದಲೇ ಸಿಎಂ ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿರುವ ವದಂತಿಗಳು ಸತ್ಯಕ್ಕೆ ದೂರವಾಗಿದ್ದು, ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿಯಿದೆ. ಹೀಗಾಗಿ ಯಾವುದೇ ಅನಗತ್ಯ ಗೊಂದಲ, ಸುದ್ದಿಗಳು ಬೇಡ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...