alex Certify ಬಿಜೆಪಿ – ಜೆಡಿಎಸ್ ಸದಸ್ಯರಿಂದ ಗೂಂಡಾಗಿರಿ; ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ – ಜೆಡಿಎಸ್ ಸದಸ್ಯರಿಂದ ಗೂಂಡಾಗಿರಿ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸೇರಿ ಗೂಂಡಾಗಿರಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಧಾನ ಪರಿಷತ್ ನಲ್ಲಿ ಗಲಾಟೆ ನಡೆಯಲು ಬಿಜೆಪಿ ಸದಸ್ಯರೇ ಕಾರಣ ಎಂದು ಆರೋಪಿಸಿದ್ದಾರೆ. ಕಲಾಪ ನಡೆಸುವಾಗ ಒಂದು ನಿಯಮವಿದೆ. ಆದರೆ ಆ ನಿಯಮಗಳನ್ನು ಬಿಜೆಪಿ ಗಾಳಿಗೆ ತೂರಿದೆ. ಸಭಾಪತಿ ಬಾರದಂತೆ ಅವರೇ ಬಾಗಿಲು ಮುಚ್ಚಿದ್ದಾರೆ. ಇದು ಪ್ರಜಾಪ್ರಭುತ್ವದ ಉಲ್ಲಂಘನೆ. ಎಂಥಾ ಗೂಂಡಾಗಿರಿ ಇದು…? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದೆ. ಬಿಜೆಪಿ-ಜೆಡಿಎಸ್ ಸದಸ್ಯರು ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ್ದಾರೆ. ಪರಿಷತ್ ನಲ್ಲಿ ಏನು ನಡೆದಿದೆ ಎಂಬುದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ. ಈ ಗೂಂಡಾಗಿರಿಯನ್ನು ನಾವು ಖಂಡಿಸುತ್ತೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...