alex Certify ಬಿಜೆಪಿ ವರಿಷ್ಠರಿಗೇ ಸೆಡ್ಡು ಹೊಡೆದ ಬಸನಗೌಡ ಪಾಟೀಲ್ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವರಿಷ್ಠರಿಗೇ ಸೆಡ್ಡು ಹೊಡೆದ ಬಸನಗೌಡ ಪಾಟೀಲ್ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಾಲಿಗೆ ಮಗ್ಗುಲ ಮುಳ್ಳಾಗಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಮ್ಮದೇ ಪಕ್ಷದ ಸರ್ಕಾರವನ್ನು ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡುವ ಮೂಲಕ ಮುಜುಗರವನ್ನುಂಟು ಮಾಡುತ್ತಿದ್ದು, ಇದೀಗ ಮತ್ತೊಂದು ಹೇಳಿಕೆ ಮೂಲಕ ಬಿಜೆಪಿ ಕೇಂದ್ರ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಶೀಘ್ರದಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವ ತಮ್ಮನ್ನು ಪಕ್ಷದಿಂದ ಉಚ್ಚಾಟಿಸಲು ಯಾರಿಗೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿ.ಕೆ. ಹರಿಪ್ರಸಾದ್ ಗೆ ಹೆಚ್ಚುವರಿ ಜವಾಬ್ದಾರಿ, ಬಂಗಾಳ ಕಾಂಗ್ರೆಸ್ ಉಸ್ತುವಾರಿ

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಯಡಿಯೂರಪ್ಪನವರ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಾನು ಮಾತನಾಡುತ್ತಿದ್ದೇನೆ. ಈ ಕುರಿತು ಪತ್ರ ಬರೆದು ಪ್ರಧಾನಿಯವರ ಗಮನಕ್ಕೂ ತಂದಿದ್ದೇನೆ. ಸತ್ಯವನ್ನು ಹೇಳುತ್ತಿರುವ ನನ್ನನ್ನು ಪಕ್ಷದಿಂದ ಹೊರಹಾಕಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...