alex Certify ಬಿಜೆಪಿ ಸೇರಿರುವ ಯಾರಿಗೂ ಕೂಡ ಅನ್ಯಾಯವಾಗಬಾರದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸೇರಿರುವ ಯಾರಿಗೂ ಕೂಡ ಅನ್ಯಾಯವಾಗಬಾರದು

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಯಾರಿಗೂ ಕೂಡ ಅನ್ಯಾಯವಾಗಬಾರದು. ಪಕ್ಷ, ಸಚಿವ ಸ್ಥಾನಗಳನ್ನು ತ್ಯಾಗ ಮಾಡಿ ಬಿಜೆಪಿಗೆ ಸೇರ್ಪಡೆಯಾದ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ಯಾರಿಗೂ ಅನ್ಯಾಯವಾಗಲ್ಲ ಎಂಬ ನಂಬಿಕೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ತ್ಯಾಗ ಮಾಡಿ ಬಂದು ಸಾಕಷ್ಟು ಹೋರಾಟ ಮಾಡಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದ ಎಲ್ಲರಿಗೂ ಸ್ಥಾನ ಸಿಗಬೇಕು. ನಮ್ಮೆಲ್ಲರ ಮನವಿ ಕೂಡ ಅದೇ ಆಗಿದೆ. ತ್ಯಾಗ ಮಾಡಿ ಬಂದ ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತೆ ಎಂಬ ಭರವಸೆಯಿದೆ. ಇನ್ನುಳಿದ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದರು.

ಇನ್ನು ಬಿ.ಎಲ್. ಸಂತೋಷ್ ಅವರ ಭೇಟಿ ಸೌಹಾರ್ದಯುತ ಭೇಟಿ. ದೆಹಲಿಗೆ ಬಂದಿದ್ದೆ ಹಾಗಾಗಿ ಅವರನ್ನು ಭೇಟಿಯಾಗಿದ್ದೇನೆ ಅಷ್ಟೇ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...