alex Certify ಬಿಪಿಎಲ್ ಕಾರ್ಡ್‌ ಹೊಂದಿದವರಿಗೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್‌ ಹೊಂದಿದವರಿಗೊಂದು ಸಿಹಿ ಸುದ್ದಿ

ಲಾಕ್‌ಡೌನ್ ಮುಂದುವರೆದಿದೆ. ಕೊರೊನಾ ಅಟ್ಟಹಾಸ ದೇಶದಲ್ಲಿ ಇನ್ನೂ ನಿಂತಿಲ್ಲ. ಇತ್ತ ಸರ್ಕಾರಗಳು, ಆರೋಗ್ಯಾಧಿಕಾರಿಗಳು ಕೊರೊನಾ ನಿಯಂತ್ರಣಕ್ಕೆ ಕೆಲಸ ಮಾಡುತ್ತಿದ್ದಾರೆ. ಆದರೂ ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಇತ್ತ ಕೊರೊನಾದಿಂದ ನಲುಗಿರುವ ಜನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಇದೀಗ ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರ ಸಹಾಯ ಮಾಡುತ್ತಿದೆ. ಹೌದು, ಇಂದು ನಗರ ಪಾಲಿಕೆಯಲ್ಲಿ ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ಜೊತೆ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಗರದಲ್ಲಿ ಕೊರೋನಾ ಎದುರಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಕರ್ಯಗಳ ಕೊರತೆ ಇರುವುದು ತಿಳಿದು ಬಂದಿದೆ. ಹಾಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾದ ಅವಶ್ಯಕತೆಗಳನ್ನು ನೀಡಲಾಗುತ್ತದೆ. ಅಕ್ಸಿಜನ್, ಔಷಧಿಗಳು, ಸಿಬ್ಬಂದಿ, ಪಿಪಿಇ ಕಿಟ್ ಒದಗಿಸುತ್ತೇವೆ. ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆಗೆ ಸಮಸ್ಯೆ ಆಗಬಾರದು ಎಂದರು.

ಇನ್ನು ಬಿಬಿಎಂಪಿ ಹೆಲ್ತ್ ಕೇರ್ ಹೆಸರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸದೃಢಗೊಳಿಸಲು ಚಿಂತನೆ ಮಾಡಲಾಗುತ್ತಿದ್ದು, ಇಂದು ನಡೆದ ಸಭೆಯಲ್ಲಿಯೂ ಚರ್ಚೆ ಮಾಡಲಾಗಿದೆ. ಔಷಧ ಪೂರೈಕೆ ಸರಿಯಾಗಿ ಆಗುತ್ತಿಲ್ಲ ಎಂಬ ದೂರಿದೆ. ಹೀಗಾಗಿ 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಉಚಿತ ಔಷಧ ನೀಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಜನೌಷದ ಅಂಗಡಿ ತೆರೆಯಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...