alex Certify ಬೆಂಗಳೂರಿಗರನ್ನ ಮತ್ತಷ್ಟು ಆತಂಕಕ್ಕೆ ನೂಕಿದ ಎರಡು ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರನ್ನ ಮತ್ತಷ್ಟು ಆತಂಕಕ್ಕೆ ನೂಕಿದ ಎರಡು ಪ್ರಕರಣ

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ ಎನ್ನುಷ್ಟರಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತೆರಡು ಜನರಿಗೆ ಸೋಂಕು  ಕಾಣಿಸಿಕೊಂಡಿದೆ.

ಎರಡೂ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಮೊದಲ ಪ್ರಕರಣ ಬೊಮ್ಮನಹಳ್ಳಿಯಲ್ಲಿ ಕಾಣಿಸಿಕೊಂಡಿದೆ. ಬೊಮ್ಮನಹಳ್ಳಿಯಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುವ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ.

ಆತನಿಗೆ ಹೇಗೆ ಸೋಂಕು ಬಂದಿದೆ ಎಂಬುದು ಗೊತ್ತಾಗ್ತಿಲ್ಲ. ಆತ ವಸ್ತುಗಳನ್ನು ಲೋಡ್, ಅನ್ಲೋಡ್ ಮಾಡ್ತಿದ್ದ ಎನ್ನಲಾಗಿದೆ. ಈತ 68 ಜನರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಈತ ಮೂರು ಆಸ್ಪತ್ರೆಗೆ ಭೇಟಿ ನೀಡಿದ್ದಾನೆ. ಆ ಎಲ್ಲ ಆಸ್ಪತ್ರೆ ವೈದ್ಯ, ಸಿಬ್ಬಂದಿ ಹಾಗೂ ಅವ್ರನ್ನು ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡುವ ಪ್ರಯತ್ನ ನಡೆಯುತ್ತಿದೆ. ಕೂಲಿ ಕಾರ್ಮಿಕ ಸಣ್ಣ ಮನೆಯಲ್ಲಿದ್ದು ಆತನ ಪ್ರಕರಣ ತಲೆನೋವಿಗೆ ಕಾರಣವಾಗಿದೆ.

ಇನ್ನೊಂದು ಪ್ರಕರಣದಲ್ಲಿ ಶಿವಾಜಿನಗರ ಖಾಸಗಿ ಆಸ್ಪತ್ರೆ ನರ್ಸ್ ಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ಈ ಆಸ್ಪತ್ರೆ ವೈದ್ಯನಿಂದ ಚಿಕಿತ್ಸೆ ಪಡೆದಿದ್ದ. ವೈದ್ಯರಿಗೆ ಸೋಂಕು  ಕಾಣಿಸಿಕೊಂಡಿತ್ತು. ಈಗ ಆಸ್ಪತ್ರೆಯಲ್ಲಿರುವ ನರ್ಸ್ ಗೆ ಸೋಂಕು ಕಾಣಿಸಿಕೊಂಡಿದೆ. ಅವರು 18 ಮಂದಿ ಜೊತೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...