ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಲಾಕ್ ಡೌನ್ ಸಡಿಲಿಕೆ ಎಲ್ಲರಲ್ಲಿ ಭಯವನ್ನುಂಟು ಮಾಡಿದೆ. ಇಂದು ರಾಜ್ಯದಲ್ಲಿ 28 ಕೊರೊನಾ ಪ್ರಕರಣ ಪತ್ತೆಯಾಗಿದೆ. ದಾವಣಗೆರೆಯಲ್ಲಿ ಆತಂಕ ಮನೆ ಮಾಡಿದೆ. ದಾವಣಗೆರೆಯಲ್ಲಿ ಇಂದು ಮತ್ತೆ 21 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ಇನ್ನು ಇಂದು ಕಲ್ಬುರ್ಗಿಯಲ್ಲಿ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಚಿಂಚೊಳ್ಳಿ ತಾಲೂಕಿಗೆ ಸೋಂಕು ಕಾಣಸಿಕೊಂಡಿರುವುದು ಆತಂಕ್ಕೆ ಕಾರಣವಾಗಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.
ಮಂಡ್ಯದಲ್ಲಿ ಎರಡು ಹೊಸ ಪ್ರಕರಣ ಕಾಣಿಸಿಕೊಂಡಿದೆ. ವಿಜಯಪುರದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 642ಕ್ಕೇರಿದೆ.