alex Certify ಬೆಳಕಿನ ಹಬ್ಬದಂದೇ ಗ್ರಾಮ ಪಂಚಾಯಿತಿ ಸದಸ್ಯನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಕಿನ ಹಬ್ಬದಂದೇ ಗ್ರಾಮ ಪಂಚಾಯಿತಿ ಸದಸ್ಯನಿಂದ ಘೋರ ಕೃತ್ಯ

ಮೈಸೂರು: ಬೆಳಕಿನ ಹಬ್ಬ ದೀಪಾವಳಿಯಂದೇ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಪತ್ನಿಯನ್ನೇ ಹತ್ಯೆಗೈದು ಸುಟ್ಟು ಹಾಕಿರುವ ಘೋರ ಘಟನೆ ಮೈಸೂರಿನ ದೊಡ್ಡಮುಲಗೋಡು ಗ್ರಾಮದಲ್ಲಿ ನಡೆದಿದೆ.

ಶಾಂತಮ್ಮ (22) ಕೊಲೆಯಾದ ಮಹಿಳೆ. ದೊಡ್ಡ ಮುಲಗೋಡು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಹಬ್ಬದ ದಿನದಂದೇ ಪತ್ನಿಯನ್ನು ಕೊಲೆಗೈದು ಬಳಿಕ ಸೀಮೆಎಣ್ಣೆ ಸುರಿದು ಶವವನ್ನು ಸುಟ್ಟು ಹಾಕಿದ್ದಾನೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಸ್ಥಳಕ್ಕಾಗಮಿಸಿರುವ ಬನ್ನೂರು ಠಾಣೆ ಪೊಲಿಸರು ಪರಿಶೀಲನೆ ನಡೆಸಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...