alex Certify ಬೈ ಎಲೆಕ್ಷನ್ ಗೆ ಕೊರೊನಾ ಕಠಿಣ ನಿಯಮ ಅನ್ವಯವಾಗಲ್ಲ: ಸಿಎಂ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈ ಎಲೆಕ್ಷನ್ ಗೆ ಕೊರೊನಾ ಕಠಿಣ ನಿಯಮ ಅನ್ವಯವಾಗಲ್ಲ: ಸಿಎಂ ಹೇಳಿಕೆ

ತುಮಕೂರು: ಉಪಚುನಾವಣೆಗೆ ಕೊರೊನಾ ಕಠಿಣ ನಿಯಮಗಳು ಅನ್ವಯವಾಗುವುದಿಲ್ಲ. ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಸಭೆ-ಸಮಾರಂಭಗಳಿಗೆ ಮಾತ್ರ ಕಠಿಣ ನಿಯಮ ಹಾಕಿದ್ದೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ವೈ., ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ನಡುವೆ ಉಪಚುನಾವಣೆ ಕೂಡ ಘೋಷಣೆಯಾಗಿರುವುದರಿಂದ ಕೊರೊನಾ ನಿಯಮ ಪಾಲನೆ ಬಗ್ಗೆ ಸ್ಪಷ್ಟನೆ ನೀಡಿದರು. ಉಪಚುನಾವಣೆಗೆ ಕಠಿಣ ನಿಯಮ ಅನ್ವಯವಿಲ್ಲ ಎಂದರು.

ಆರ್.ಎಸ್.ಎಸ್. ಸರಕಾರ್ಯವಾಹ್ ಆಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ

ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲಾ-ಕಾಲೇಜುಗಳನ್ನು ಬಂದ್ ಮಾಡುವ ಯೋಚನೆ ಸಧ್ಯಕ್ಕಿಲ್ಲ. ಜನರು ಎಚ್ಚೆತುಕೊಳ್ಳದಿದ್ದಲ್ಲಿ, ಕೊರೊನಾ ಪ್ರಕರಣಗಳು ಹೆಚ್ಚಿದರೆ ಕಠಿಣ ನಿಯಮಗಳ ಜಾರಿಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...