alex Certify ಬ್ರೇಕಿಂಗ್ ನ್ಯೂಸ್: ಬೆದರಿಕೆ ಪತ್ರದ ಹಿಂದಿನ ಸ್ಫೋಟಕ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಬೆದರಿಕೆ ಪತ್ರದ ಹಿಂದಿನ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಪ್ರಕರಣದ ಹಿಂದಿನ ರಹಸ್ಯ ಬಯಲಾಗಿದ್ದು, ದ್ವೇಷದ ಕಾರಣಕ್ಕೆ ಈ ಪತ್ರ ಬರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದ್ವೇಷ ಸಾಧನೆಗಾಗಿ ಆರೋಪಿಗಳು ಉಗ್ರ ಸಂಘಟನೆ ಹೆಸರಲ್ಲಿ ಸಿಟಿ ಸಿವಿಲ್ ಕೋರ್ಟ್ ನ ಜಡ್ಜ್ ಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಪತ್ನಿ ಹೆಸರಲ್ಲಿದ್ದ ಆಸ್ತಿ ಕಬಳಿಕೆ ವಿಚಾರವಾಗಿ ಕೌಟುಂಬಿಕ ಕಲಹ ಆರಂಭವಾಗಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಇದೇ ದ್ವೇಷಕ್ಕೆ ಪತ್ರ ಬರೆದಿದ್ದಾಗಿ ಬಂಧಿತ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಪ್ರಕರಣದ ಇಬ್ಬರು ಆರೋಪಿಗಳಾದ ತುಮಕೂರು ಜಿಲ್ಲೆಯ ತಿಪಟೂರು ಮೂಲದ ರಾಜಶೇಖರ್ ಹಾಗೂ ವೇದಾಂತ್ ಎಂಬುವರನ್ನು ಇದೀಗ ಪೊಲೀಸರು ಮಹಜರಿಗೆ ಕರೆದೊಯ್ಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...