ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಸಾರ್ವಜನಿಕರು ಹೈರಾಣಾಗಿ ಹೋಗಿದ್ದರು. ಇದೀಗ ನಾಲ್ಕನೇ ಹಂತದ ಲಾಕ್ ಡೌನ್ ನಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಸಡಿಲಿಕೆಗಳನ್ನು ನೀಡಿದೆ.
ಚಿತ್ರ ಮಂದಿರ, ಜಿಮ್, ಮಾಲ್ ಬಂದ್ ಮುಂದುವರೆಯಲಿದ್ದು, ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮುಂದಿನ ಕೆಲ ಸಮಯದವರೆಗೆ ಪ್ರತಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತಿದೆ.
ಕಂಪ್ಲೀಟ್ ಲಾಕ್ ಡೌನ್ ಅವಧಿಯಲ್ಲಿ ತುರ್ತು ಹಾಗೂ ಅಗತ್ಯ ಸೇವೆಯನ್ನು ಹೊರತುಪಡಿಸಿದರೆ ಮಿಕ್ಕೆಲ್ಲವೂ ಬಂದ್ ಆಗಲಿವೆ. ಲಾಕ್ಡೌನ್ ನಿಯಮದಲ್ಲಿ ಸರ್ಕಾರ ಸಡಿಲಿಕೆ ಮಾಡಿರುವುದರಿಂದ ರಜೆ ಇರುವ ಕಾರಣ ಭಾನುವಾರದಂದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದರೆ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಬಹುದೆಂಬ ಕಾರಣಕ್ಕೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.