alex Certify ಮಂಗಳವಾರ ರಾಜ್ಯಕ್ಕೆ ಕೊರೊನಾ ಶಾಕ್: ಒಂದೇ ದಿನ 10000ಕ್ಕೂ ಅಧಿಕ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳವಾರ ರಾಜ್ಯಕ್ಕೆ ಕೊರೊನಾ ಶಾಕ್: ಒಂದೇ ದಿನ 10000ಕ್ಕೂ ಅಧಿಕ ಪ್ರಕರಣ

ಮಂಗಳವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸ್ಪೋಟವಾಗಿದೆ 24 ಗಂಟೆ ಅವಧಿಯಲ್ಲಿ 10,453 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಇದೇ ಮೊದಲ ಬಾರಿಗೆ 10000ಕ್ಕೂ ಅಧಿಕ ಪ್ರಕರಣಗಳು ರಾಜ್ಯದಲ್ಲಿ ದಾಖಲಾದಂತಾಗಿದೆ.

ಅಲ್ಲದೆ 12 ಜಿಲ್ಲೆಗಳಲ್ಲಿ ಕೊರೊನಾ ವ್ಯಾಪಕವಾಗಿ ಏರಿಕೆಯಾಗತೊಡಗಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಹಾಸನ, ತುಮಕೂರು, ಗದಗ, ಶಿವಮೊಗ್ಗ, ಬೆಂಗಳೂರು ನಗರ, ಬೆಳಗಾವಿ, ಉಡುಪಿ, ಹಾವೇರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗತೊಡಗಿದೆ.

ಜೊತೆಗೆ ಸಾಂಕ್ರಾಮಿಕ ರೋಗ ಲಕ್ಷಣ ಇರುವವರಲ್ಲೂ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ-ಸಮಾರಂಭಗಳ ಮೇಲೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...