alex Certify ಮದುವೆಯಾಗಲಿಚ್ಛಿಸುವವರಿಗೆ ಸಿಹಿ ಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಾಮೂಹಿಕ ವಿವಾಹ ನಡೆಸಲು ತೀರ್ಮಾನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗಲಿಚ್ಛಿಸುವವರಿಗೆ ಸಿಹಿ ಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಾಮೂಹಿಕ ವಿವಾಹ ನಡೆಸಲು ತೀರ್ಮಾನ..!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಸಪ್ತಪದಿ ಯೋಜನೆ ಅನೇಕರಿಗೆ ಅನುಕೂಲ ಆಗುತ್ತಿದೆ. ಈ ಯೋಜನೆಯನ್ನು ಬಡವರಿಗೆ ಸಹಾಯವಾಗಲೆಂದು ಜಾರಿಗೆ ತರಲಾಗಿದೆ. ಇತ್ತೀಚೆಗೂ ಕೂಡ 23 ಜೋಡಿಗಳು ಈ ಯೋಜನೆಯಡಿ ಮದುವೆಯಾಗಿದ್ದಾರೆ.

ಇದೀಗ ಮತ್ತೊಂದು ಖುಷಿಯ ವಿಚಾರವನ್ನು ಬಹಿರಂಗಪಡಿಸಿದ್ದಾರೆ ರಾಜ್ಯ ಬಂದರು ಮತ್ತು ಮೀನುಗಾರಿಕೆ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ. ಹೌದು ಇನ್ಮುಂದೆ ಪ್ರತಿ ತಿಂಗಳು ಸಪ್ತಪದಿ ನಡೆಯಲಿದೆ. ಅಂದರೆ ಪ್ರತಿ ತಿಂಗಳು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗುತ್ತದೆ. ಮಾರ್ಚ್ ನಿಂದ ಪ್ರತಿ ತಿಂಗಳು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಮುಂದಿನ ವರ್ಷ ಅಂದರೆ ಜನವರಿ 20 ಹಾಗೂ 23 ರಂದು ಸಾಮೂಹಿಕ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಇನ್ನು ಫೆಬ್ರವರಿಯಲ್ಲೂ 2 ದಿನ ಸಪ್ತಪದಿ ಆಯೋಜನೆ ಮಾಡಲಾಗುತ್ತಿದೆ. ಇದರಿಂದ ಬಡವರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...