alex Certify ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು; ಇದು ವಿಶ್ವಾಸದ್ರೋಹ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು; ಇದು ವಿಶ್ವಾಸದ್ರೋಹ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್

ಮಸ್ಕಿ: ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗವಾಗಿದೆ.

ಫಲಿತಾಂಶ ಹೊರಬೀಳುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್, ನನಗೆ ಸೋಲಾಗಲ್ಲ ಎಂದುಕೊಂಡಿದ್ದೆ. ಆದರೆ ವಿಶ್ವಾಸದ್ರೋಹವಾಗಿದೆ. ಅಭಿವೃದ್ಧಿ, ಒಳ್ಳೆತನ ಮುಖ್ಯವಲ್ಲ ಎಂದು ಜನ ಸಾಬೀತು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ, ಬಿಜೆಪಿ ಸೋಲಿನ ರಹಸ್ಯ ಬಿಚ್ಚಿಟ್ಟ ಅಭ್ಯರ್ಥಿ

ಜನ ಬದಲಾವಣೆ ಬಯಸಿ, ಕಾಂಗ್ರೆಸ್ ನ ಬಸವನಗೌಡ ತುರುವಿಹಾಳಗೆ ಮತಹಾಕಿದ್ದಾರೆ. ಕ್ಷೇತ್ರದ ಜನತೆಗೆ ದೇವರು ಒಳ್ಳೆಯದು ಮಾಡಲಿ. ಜನರ ಮನಸ್ಥಿತಿಯಲ್ಲಿ ಸೋಲಿಸಬೇಕೆಂಬುದು ಬಂದಾಗ ಯಾರು ಬಂದು ಏನೇ ಪ್ರಚಾರ ಮಾಡಿದರೂ ಏನೂ ಪ್ರಯೋಜನ ಆಗಲ್ಲ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...