alex Certify ಮಹಾ ಡಿಸಿಎಂ ಉದ್ಧಟತನದ ಹೇಳಿಕೆ ಖಂಡನೀಯ ಎಂದ ಸಿಎಂ ಬಿ ಎಸ್ ವೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾ ಡಿಸಿಎಂ ಉದ್ಧಟತನದ ಹೇಳಿಕೆ ಖಂಡನೀಯ ಎಂದ ಸಿಎಂ ಬಿ ಎಸ್ ವೈ

ಬೆಂಗಳೂರು: ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಭಾಗ ಎಂದಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಉದ್ಧಟತನದ ಮಾತುಗಳನ್ನಾಡಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದರು.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. ಇದೇ ವೇಳೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಬಾರದು. ಒಂದು ವೇಳೆ ಬಲವಂತದ ಬಂದ್ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...