alex Certify ಮಾಜಿ ಕಾರ್ಪೊರೇಟರ್ ಸೇರಿ 12 ಜನರಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಕಾರ್ಪೊರೇಟರ್ ಸೇರಿ 12 ಜನರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆರ್ ಟಿ ಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಗೌರಮ್ಮ, ಕಾಂಗ್ರೆಸ್ ಮುಖಂಡ ಗೋವಿಂದರಾಜು ಸೇರಿದಂತೆ ಎಲ್ಲಾ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಲಿಂಗರಾಜು ಹತ್ಯೆ ಪ್ರಕರಣದಲ್ಲಿ ಎಲ್ಲಾ 12 ಆರೋಪಿಗಳ ವಿರುದ್ಧ ಅಪರಾಧ ಸಾಬೀತಾಗಿದ್ದು, ಇದೀಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿಗಳಾದ ಮಾಜಿ ಕಾರ್ಪೊರೇಟರ್ ಗೌರಮ್ಮ, ಕಾಂಗ್ರೆಸ್ ಮುಖಂಡ ಗೋವಿಂದರಾಜು, ಶಂಕರ, ಚಂದ್ರ, ರಾಘವೇಂದ್ರ, ರಂಗಸ್ವಾಮಿ, ಉಮಾಶಂಕರ್, ಭವಾನಿ, ವೇಲು, ಜಾಹೀರ್, ಲೋಕನಾಥ್, ಸುರೇಶ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಆರ್ ಟಿ ಐ ಕಾರ್ಯಕರ್ತರಾಗಿದ್ದ ಲಿಂಗರಾಜು ಅವರನ್ನು 2012 ನವೆಂಬರ್ 20 ರಂದು ಅವರ ಮನೆ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...