ಮಾರಣಾಂತಿಕ ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ ಇಂದು ಮತ್ತೊಂದು ಬಲಿಯಾಗಿದ್ದು, ಇದರಿಂದಾಗಿ ಮೃತಪಟ್ಟವರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಲಬುರಗಿಯ ವೃದ್ದರೊಬ್ಬರು ಇಂದು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಲಾಕ್ ಡೌನ್ ಸಡಿಲಿಕೆ ನಂತರ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು, ಅದರಲ್ಲೂ ಹೊರ ರಾಜ್ಯಗಳಿಂದ ಬಂದವರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪೀಡಿತರಾಗಿದ್ದಾರೆ.