alex Certify ಮಿನಿ ಕುರುಕ್ಷೇತ್ರದಲ್ಲಿ ನಾಳೆ ’ಸಾರಥಿ’ ಮತಬೇಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿನಿ ಕುರುಕ್ಷೇತ್ರದಲ್ಲಿ ನಾಳೆ ’ಸಾರಥಿ’ ಮತಬೇಟೆ

ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಆರ್.ಆರ್. ನಗರ ಚುನಾವಣಾ ಅಖಾಡಕ್ಕೆ ತಾರಾ ಮೆರಗು ಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಬರೋಬ್ಬರಿ 13 ಗಂಟೆಗಳ ಕಾಲ ಮತಯಾಚನೆ ಮಾಡಲಿದ್ದಾರೆ.

ನಟ ದರ್ಶನ್ ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಚುನಾವಣಾ ಪ್ರಚಾರದಲ್ಲಿ ಅವರು ಭಾಗಿಯಾಗುತ್ತಿಲ್ಲ. ನಾಳೆ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ದರ್ಶನ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಮುನಿರತ್ನ ಮಾಹಿತಿ ನೀಡಿದ್ದಾರೆ.

ಹಾಗಾಗಿ ಮಿನಿ ಕುರುಕ್ಷೇತ್ರ ಎಂದೇ ಬಿಂಬಿತವಾಗಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಅಖಾಡದಲ್ಲಿ ನಾಳೆ ಸಾರಥಿ ಮತಬೇಟೆ ಖಚಿತವಾಗಿದ್ದು, ಜ್ಞಾನಭಾರತಿ, ಲಗ್ಗೆರೆ, ಕೊಟ್ಟಿಗೆಪಾಳ್ಯ, ಜೆ.ಪಿ. ಪಾರ್ಕ್, ಸೇರಿದಂತೆ ಆರ್.ಆರ್.ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದೇ ವೇಳೆ ಬಿಜೆಪಿ ಬೈಕ್ ರ್ಯಾಲಿಯನ್ನು ಕೂಡ ಹಮ್ಮಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...