alex Certify ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು ರಾಜ್ಯ ಸರ್ಕಾರ ತಕ್ಷಣ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕುರುಬ ಎಸ್.ಟಿ. ಹೋರಾಟ ಸಮಿತಿ ಕಾರ್ಯದರ್ಶಿ ರಾಜೇಂದ್ರ ಸಣ್ಣಕ್ಕಿ, ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ದರೆ ರಾಜ್ಯದ ವಿವಿಧೆಡೆಗಳಲ್ಲಿ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್

ರಾಜ್ಯದಲ್ಲಿ ನಮ್ಮದು ಅತಿದೊಡ್ದ ಸಮುದಾಯ. ಆದರೆ ಕುರುಬರು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕವಾಗಿ ಅತಿ ಹಿಂದುಳಿದ ವರ್ಗವಾಗಿದೆ. ಹೀಗಾಗಿ ನಮಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...