alex Certify ಮುಳುಗುತ್ತಿರುವ ಕಾಂಗ್ರೆಸ್ ಹಡಗಿಗೆ ಸಿದ್ದರಾಮಯ್ಯ ಎರಡು ರಂಧ್ರ ಕೊರೆಯಲು ಹೊರಟಿದ್ದಾರೆ: ಸಚಿವ ಸೋಮಶೇಖರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಳುಗುತ್ತಿರುವ ಕಾಂಗ್ರೆಸ್ ಹಡಗಿಗೆ ಸಿದ್ದರಾಮಯ್ಯ ಎರಡು ರಂಧ್ರ ಕೊರೆಯಲು ಹೊರಟಿದ್ದಾರೆ: ಸಚಿವ ಸೋಮಶೇಖರ್ ತಿರುಗೇಟು

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಮುಳುಗುತ್ತಿರುವ ಹಡಗು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಪಕ್ಷವೇ ಮುಳುಗುತ್ತಿರುವ ಹಡಗು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗಾಗಿದೆ. ಆ ಹಡಗಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡ್ರೈವರ್ ಆಗಿದ್ದಾರೆ. ಅದಕ್ಕೆ ಎರಡು ರಂಧ್ರ ಕೊರೆಯಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಕಾಂಗ್ರೆಸ್ ನಲ್ಲಿಯೇ ನೂರೆಂಟು ಸಮಸ್ಯೆಗಳಿರುವಾಗ ನಮ್ಮತ್ತ ಬೆರಳು ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

 ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಗೆ ಕೊರೊನಾ

ಇದೇ ವೇಳೆ ಶಾಸಕ ಯತ್ನಾಳ್ ರನ್ನು ಪಕ್ಷದಿಂದ ಹೊರಹಾಕುವುದಾಗಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಯತ್ನಾಳ್ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಚೌಕಟ್ಟು ಮೀರಿ ಮಾತನಾಡಿದರೆ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳುತ್ತದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...