alex Certify ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತು ಅದರಲ್ಲೂ ಸ್ವಾಹಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತು ಅದರಲ್ಲೂ ಸ್ವಾಹಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತಿದ್ದು, ಅದರಲ್ಲೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ನ ಸಹ ಸದಸ್ಯತ್ವ ಪಡೆದಿದ್ದು, ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಕಳೆದ ಬಾರಿ ಚುನಾವಣೆಯಲ್ಲಿ ಶರತ್ ವಿರುದ್ಧ ಪ್ರಚಾರ ಮಾಡಿದ್ದೆ. ಈಗ ಅವರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದು, ಅವರ ಬೆಂಬಲವನ್ನು ನಾವು ಒಪ್ಪಿದ್ದೇವೆ. ಎಂಟಿಬಿ ನಾಗರಾಜ್ ಸೋತು ಹಿಂಬಾಗಿಲ ಮೂಲಕ ಮಂತ್ರಿಯಾಗಿದ್ದಾರೆ. ಸಚಿವರಾಗಿದ್ದಾರೆ ಎಂಬ ಮಾತ್ರಕ್ಕೆ ಅವರು ಹೊಸಕೋಟೆ ಜನರ ಪ್ರತಿನಿಧಿಯಲ್ಲ. ಶರತ್ ಬಚ್ಚೇಗೌಡ ಆ ಕ್ಷೇತ್ರದ ಪ್ರತಿನಿಧಿ. ಅವರು ಕ್ಷೇತ್ರದಲ್ಲಿ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ. ಹಾಗಾಗಿ ಕಾಂಗ್ರೆಸ್ ಅವರಿಗೆ ಬೆಂಬಲಿಸಲಿದೆ ಎಂದರು.

ಪ್ರಧಾನಿ ಮೋದಿಯವರಿಗೆ ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕಾಣುತ್ತಿಲ್ಲವೇ…? HDK ಪ್ರಶ್ನೆ

ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕೂತಿದ್ದಾರೆ. ಡಕೋಟಾ ಬಸ್ ನಲ್ಲಿ ಕೂತು ಸ್ವಾಹಾ ಮಾಡುತ್ತಿದ್ದಾರೆ. ರಾಜ್ಯದಲ್ಲಿರುವುದು ಅಭಿವೃದ್ಧಿಪರ ಸರ್ಕಾರವಲ್ಲ. ಲೂಟಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...