alex Certify ಯತ್ನಾಳ್ ಗೆ ಟಾಂಗ್ ನೀಡಿದ ಎಂ.ಪಿ. ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯತ್ನಾಳ್ ಗೆ ಟಾಂಗ್ ನೀಡಿದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂಗೆ ಡೆಡ್ ಲೈನ್ ನೀಡುವುದು ಸರಿಯಲ್ಲ. ಪಕ್ಷದ ಮುಖಂಡರನ್ನು ಗೌರವಿಸಬೇಕು. ಹಾದಿ ಬೀದಿಯಲ್ಲಿ ನಿಂತು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಯತ್ನಾಳ್ ಗೆ ಬಸ್ ನಲ್ಲಿ ಟವೆಲ್ ಹಾಕಿ ಅಭ್ಯಾಸ. ಹಾಗಾಗಿ ಇಲ್ಲಿಯೂ ಟವೆಲ್ ಹಾಕಲು ಯತ್ನಿಸಿದ್ದಾರೆ. ಸಿಎಂ ಖುರ್ಚಿ ಖಾಲಿಯಿಲ್ಲ. ಅನಗತ್ಯ ಹೇಳಿಕೆಗಳನ್ನು ನೀಡುವುದರಿಂದ ಅವರ ವರ್ಚಸ್ಸೇ ಕಡಿಮೆಯಾಗುತ್ತೆ ಎಂದು ಗುಡುಗಿದರು.

ಇದೇ ವೇಳೆ ಮರಾಠ ಪ್ರಾಧಿಕಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ, ತಾಕತ್ತಿದ್ದರೆ ರಾಜ್ಯ ಬಂದ್ ಮಾಡಲಿ. ಬಂದ್ ಯಶಸ್ವಿಯಾಗದಂತೆ ನೋಡಿಕೊಳ್ಳುತ್ತೇವೆ. ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...