alex Certify ಯತ್ನಾಳ್ ಹಿಂದೂತ್ವವಾದಿ ಎಂಬ ಖುಷಿಯಿದೆ: ಸಚಿವ ಈಶ್ವರಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯತ್ನಾಳ್ ಹಿಂದೂತ್ವವಾದಿ ಎಂಬ ಖುಷಿಯಿದೆ: ಸಚಿವ ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಪದೇ ಪದೇ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನಿಂದ ನೋಟೀಸ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಓರ್ವ ಹಿಂದೂತ್ವವಾದಿ ಎಂಬ ಖುಷಿಯಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಯತ್ನಾಳ್ ಸಿಎಂ ಬಗ್ಗೆ ನೀಡುವ ಹೇಳಿಕೆಗಳನ್ನು ನಾನು ಒಪ್ಪಲ್ಲ. ಆದರೆ ಅವರೊಬ್ಬ ಹಿಂದೂತ್ವವಾದಿ ಎಂಬುದಕ್ಕೆ ನಾನು ಖುಷಿ ಪಡುತ್ತೇನೆ. ಯತ್ನಾಳ್ ಗೆ ಕೇಂದ್ರದ ನಾಯಕರು ನೋಟೀಸ್ ಕಳುಹಿಸಿದ್ದು, ಅದಕ್ಕೆ ಅವರು ಉತ್ತರ ಕೊಟ್ಟಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ನಾಯಕರೇ ನಿರ್ಧರಿಸುತ್ತಾರೆ ಎಂದರು.

ಇದೇ ವೇಳೆ ಮೀಸಲಾತಿ ಹೋರಾಟದ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಆದರೆ ಅರ್ಹತೆ ಇರುವ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...