alex Certify ಯಾರು ಯಾವ ಧರ್ಮಕ್ಕೆ ಬೇಕಾದರೂ ಸೇರಬಹುದೆಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರು ಯಾವ ಧರ್ಮಕ್ಕೆ ಬೇಕಾದರೂ ಸೇರಬಹುದೆಂದ ಸಿದ್ದರಾಮಯ್ಯ

ಯಾರು ಯಾವ ಧರ್ಮ ಆಚರಿಸಬೇಕು ಎಂಬುದು ಅವರ ಸ್ವಂತ ಆಯ್ಕೆಯಾಗಿದ್ದು, ಯಾರು ಯಾವ ಧರ್ಮಕ್ಕೆ ಬೇಕಾದರೂ ಸೇರ್ಪಡೆಯಾಗಬಹುದು. ಆದರೆ ಮತಾಂತರಕ್ಕೆ ಬಲವಂತ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹಮ್ಮದ್ ಏರ್ಪಡಿಸಿದ್ದ ಆಹಾರ ಕಿಟ್ ವಿತರಣೆಯಲ್ಲಿ ಭಾಗವಹಿಸಿದ್ದ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕರೋನಾ ನಿಯಂತ್ರಣಕ್ಕೆ ಬಾರದೆ ಲಾಕ್ಡೌನ್ ಸಂಪೂರ್ಣ ಸಡಿಲಿಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ ಸಿದ್ದರಾಮಯ್ಯ, ಇದರಿಂದಾಗಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ದೂರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...