alex Certify ರಮೇಶ್ ಜಾರಕಿಹೊಳಿಯ ಪೇಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ; ಕಾಂಗ್ರೆಸ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿಯ ಪೇಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಏನು ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಯುವತಿ ತನ್ನ ಕುಟುಂಬವನ್ನು ಬೆದರಿಸಲಾಗುತ್ತಿದೆ ಎಂದು ಪದೇ ಪದೇ ಆರೋಪಿಸಿದ್ದಾಳೆ, ತನ್ನ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಅಂಗಲಾಚಿದ್ದಾಳೆ, ಬಿಜಾಪುರದಲ್ಲಿದ್ದ ಯುವತಿ ಕುಟುಂಬ ಬೆಳಗಾವಿಯಲ್ಲಿ ದೂರು ದಾಖಲಿಸುತ್ತದೆ. ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿಯ ಪೇಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಮೊಹಮ್ಮದ್ ನಲಪಾಡ್ – ಮಿಥುನ್ ರೈ ಅರೆಸ್ಟ್

ಸಿಡಿ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಬೆಳಗಾವಿಯಲ್ಲಿ ಏನಾಗುತ್ತಿದೆ ಎನ್ನುವುದು ಜಗತ್ತಿಗೆ ತಿಳಿದ ವಿಚಾರ, ಹೀಗಿರುವಾಗ ಯುವತಿ ಕುಟುಂಬ ಸ್ವತಂತ್ರವಾಗಿ ತಮ್ಮಿಚ್ಛೆಯಂತಿದೆಯೇ ಎನ್ನುವ ಅನುಮಾನ ಮೂಡುತ್ತದೆ. ಗೃಹ ಸಚಿವರೇ, ಆರೋಪಿಯನ್ನು ಬಂಧಿಸದೆ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೆ ಏನು ಮಾಡಲು ಹೊರಟಿದ್ದೀರಿ? ಎಂದು ಪ್ರಶ್ನಿಸಿದೆ.

ಪ್ರಕರಣ ಹೊರಬಂದು 27 ದಿನಗಳಾಗಿವೆ. ಆದರೂ ಯುವತಿ ಪತ್ತೆ ಹಚ್ಚಲಾಗಿಲ್ಲ, ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿ ನಾಲ್ಕು ದಿನಗಳಾಗಿವೆ ಆದರೂ ಬಂಧಿಸಲಾಗಿಲ್ಲ. ಬೊಮ್ಮಾಯಿಯವರಿಗೆ ನೀವೇ ಗೃಹ ಮಂತ್ರಿಗಳೆಂದು ನೆನಪಿಸಬೇಕಾದ ಕಾಲ ಬಂದಿದೆ ಎಂದು ಕುಟುಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...