alex Certify ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ: ಸಚಿವ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಬೇಸರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ: ಸಚಿವ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಬೇಸರ

ಬೆಂಗಳೂರು: ನಾನು ಲಾಬಿ ಮಾಡಿದ್ದರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ನಾನು ಲಾಬಿ ಮಾಡಿಲ್ಲ, ಮುಂದೆಯೂ ಮಾಡಲ್ಲ. ಸಚಿವ ಸ್ಥಾನ ನೀಡಲೇಬೇಕು ಎಂದು ನಾನು ಕೇಳಿಲ್ಲ. ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ನಮ್ಮ ಹಣೆಬರಹದಲ್ಲಿ ಸಚಿವ ಸ್ಥಾನ ಬರೆದಿಲ್ಲ. ನಾವು ಅದೃಷ್ಟ ವಂಚಿತರು ಎಂದು ಭಾವಿಸಬೇಕು. ಹಾಗಂತ ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಅಧಿಕಾರ ಎನ್ನುವುದು ಮುಳ್ಳಿನ ಹಾಸಿಗೆ ಇದ್ದಂತೆ ಅದು ಸುಲಭದ ಮಾತಲ್ಲ. ಇದೆಲ್ಲವೂ ರಾಜಕಾರಣದಲ್ಲಿ ಸಹಜ. ಇದೆಲ್ಲವನ್ನೂ ಸಹಿಸಿಕೊಂಡು ಹೋಗಬೇಕು ಎಂದರು.

ನಮ್ಮ ನಾಯಕರು ನನಗೆ ಸಚಿವ ಸ್ಥಾನ ನೀಡಿಲ್ಲ. ಆದರೂ ಯಡಿಯೂರಪ್ಪ ನನಗೆ ತಂದೆ ಸಮಾನ. ಬಿ.ವೈ.ವಿಜಯೇಂದ್ರ ಬಂದು ಮಾತನಾಡಿದ್ದಾರೆ. ಮನೆಯವರಂತೆ ಬಂದು ಮಾತನಾಡಿದ್ದಾರೆ. ಮನೆಯವರು ಎಂದ ಮೇಲೆ ತ್ಯಾಗ ಮಾಡಬೇಕಾಗುತ್ತದೆ. ಸಂದರ್ಭ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...