alex Certify ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ: ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜನರು ನಮ್ಮನ್ನು ಛೀ… ಥೂ ಎಂದು ಉಗಿತಿದ್ದಾರೆ. ಇಡೀ ಸಮಾಜವೇ ತಲೆ ತಗ್ಗಿಸುವಂತಹ ಕೃತ್ಯ ಇದು ಎಂದು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವೆಲ್ಲ ರಾಜಕಾರಣಿಗಳು ಎಂದು ಹೇಳಿಕೊಳ್ಳಲೂ ಅಸಹ್ಯವಾಗುತ್ತಿದೆ. ನಮ್ಮ ಮಕ್ಕಳು, ನಮ್ಮ ಕುಟುಂಬ ಇಂದು ನಮ್ಮನ್ನು ಹೇಗೆ ನೋಡಬಹುದು ಎಂಬುದು ಬೇಸರದ ಸಂಗತಿ. ಇವರಿಂದಾಗಿ ಎಲ್ಲಾ ರಾಜಕಾರಣಿಗಳಿಗೂ ಕೆಟ್ಟ ಹೆಸರು ಬರುವಂತಾಗಿದೆ ಎಂದರು.

ಇಳಿಯುತ್ತಿರುವ ಜಿಡಿಪಿಯನ್ನು ಮೋದಿಯವರ ಗಡ್ಡಕ್ಕೆ ಹೋಲಿಸಿದ ಶಶಿ ತರೂರ್

ವಿಡಿಯೋದಲ್ಲಿ ಯಡಿಯೂರಪ್ಪನವರು ಭ್ರಷ್ಟ ಎಂದೂ ಹೇಳಿದ್ದಾರೆ. ಇದಕ್ಕೆ ಯಡಿಯೂರಪ್ಪ ಹಾಗೂ ನಳೀನ್ ಕುಮಾರ್ ಕಟೀಲ್ ಉತ್ತರ ಕೊಡಬೇಕು. ನಾವು ಉತ್ತರ ಕೊಡೋ ಸಮಯ ಕೂಡ ಬರುತ್ತೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...