alex Certify ರಾಜಕೀಯದಲ್ಲಿ ಹೂವಿನ ಹಾರ, ಜೈಕಾರ, ಕಲ್ಲೆಸೆತ, ಮೊಟ್ಟೆ ಎಸೆತ ಎಲ್ಲವೂ ಇರುತ್ತದೆ ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯದಲ್ಲಿ ಹೂವಿನ ಹಾರ, ಜೈಕಾರ, ಕಲ್ಲೆಸೆತ, ಮೊಟ್ಟೆ ಎಸೆತ ಎಲ್ಲವೂ ಇರುತ್ತದೆ ಎಂದ ಡಿ.ಕೆ.ಶಿವಕುಮಾರ್

ಕಲಬುರ್ಗಿ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ತಮ್ಮ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕೀಯದಲ್ಲಿ ಇದೆಲ್ಲ ಸಹಜ. ರಾಜಕೀಯದಲ್ಲಿ ಹೂವಿನ ಹಾರ ಹಾಕುವವರು, ಜೈಕಾರ ಹಾಕುವವರು, ಕಲ್ಲು ಹೊಡೆಯುವವರು, ಮೊಟ್ಟೆ ಎಸೆಯುವವರು ಎಲ್ಲ ರೀತಿ ಜನರೂ ಇರುತ್ತಾರೆ. ಅವರು ಮಾಡಿದರೆಂದು ನಾವು ಮಾಡುತ್ತಾ ಹೋಗಬಾರದು ಚುನಾವಣೆಯನ್ನು ಶಾಂತಿಯುತವಾಗಿ ಎದುರಿಸೋಣ ಅಷ್ಟೇ ಎಂದಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೀನಿ. ಹಾಗಾಗಿ ಮತ್ತೆ ಆ ಬಗ್ಗೆ ಮಾತನಾಡಲ್ಲ. ಬಿಜೆಪಿಯ ಸಂಸ್ಕೃತಿಯನ್ನು ಜನ ನೋಡುತ್ತಿದ್ದಾರೆ. ಅವರ ನಾಲಿಗೆ, ಬಾಯಿ ಏನೇನೋ ಇರುತ್ತೆ ಏನೆನೋ ಮಾತಾಡ್ತಾರೆ. ಇದಕ್ಕೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ ಎಂದರು.

ಡಿ.ಕೆ. ಶಿವಕುಮಾರ್ ಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಜೈನಮುನಿಗಳು

ಸಧ್ಯಕ್ಕೆ ಸಿಡಿ ಪ್ರಕರಣದ ಬಗ್ಗೆ ನಾನು ಏನೂ ಮಾತನಾಡಲ್ಲ. ಯುವತಿ ಪೋಷಕರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮಾಡಲಿ ಬಿಡಿ. ಅವರ ಅನುಕೂಲಕ್ಕೆ ಏನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...