ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಭಾನುವಾರದಂದು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯ ತಿಳಿಸಿರುವ ಅಣ್ಣಾಮಲೈ, ಜನರ ಮಧ್ಯೆ ಇದ್ದುಕೊಂಡೇ ಕೆಲಸ ಮಾಡಬೇಕು ಎನ್ನುವ ಕಾರಣಕ್ಕಾಗಿ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ನಾನು ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಹತ್ತು ವರ್ಷಗಳಲ್ಲಿ ಜನ ಅತ್ಯಂತ ಪ್ರೀತಿಯಿಂದ ಕಂಡಿದ್ದಾರೆ. ರಾಜೀನಾಮೆ ಬಳಿಕ ಈಗ ಊರಿಗೆ ಬಂದು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದೇನೆ. ಮುಂದಿನ ದಿನಗಳಲ್ಲಿ ರಾಜಕೀಯ ಪ್ರವೇಶಿಸಿ ಸಾರ್ವಜನಿಕ ಸೇವೆ ಮಾಡುತ್ತೇನೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.