ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಂತೆ ಕಾಣ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಇಂದು ಒಂದು ಪ್ರಕರಣ ಕೂಡ ಬೆಳಕಿಗೆ ಬಂದಿಲ್ಲ. ರಾಜ್ಯದಲ್ಲಿ ಒಟ್ಟೂ 11 ಪ್ರಕರಣಗಳು ಇಂದು ಬೆಳಕಿಗೆ ಬಂದಿದೆ.
ಕಲಬುರ್ಗಿಯಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಹಸಿರು ವಲಯ ದಾವಣಗೆರೆಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಮೈಸೂರಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಖುಷಿ ಸುದ್ದಿಯೆಂದ್ರೆ ಇಂದು 9 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಅದ್ರಲ್ಲಿ ಮೈಸೂರಿನ 8 ಮಂದಿ ಹಾಗೂ ಬೆಳಗಾವಿಯ ಒಬ್ಬ ರೋಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.