alex Certify ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

 

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಚೇರಿಗೆ ಹಾಜರಾಗುವವರು ಅರೋಗ್ಯ ಸೇತು ಆಪ್ ಬಳಸುವುದು ಕಡ್ಡಾಯವಾಗಿದ್ದು, ಇದನ್ನು ಡೌನ್ಲೋಡ್ ಮಾಡಿಕೊಳ್ಳದೆ ಕಚೇರಿಗೆ ಹಾಜರಾಗುವಂತಿಲ್ಲ ಎಂದು ತಿಳಿಸಲಾಗಿದೆ.

ವೈದ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ದೇಶದಾದ್ಯಂತ ಹತ್ತು ಕೋಟಿಗೂ ಅಧಿಕ ಮಂದಿ ಇದನ್ನು ಬಳಸುತ್ತಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಅರೋಗ್ಯ ಸೇತು ಆಪ್ ಪ್ರಬಲ ಅಸ್ತ್ರವಾಗಿ ಬಳಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಈ ಆಪ್ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಬಳಕೆದಾರರ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುತ್ತದೆ. ಸ್ಮಾರ್ಟ್ಫೋನ್ ಹೊಂದಿರುವ ಎಲ್ಲರೂ ಈ ಆಪ್ ಬಳಸುವ ಮೂಲಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಹಕಾರ ನೀಡಬೇಕೆಂದು ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...