alex Certify ರಾಜ್ಯ ಸರ್ಕಾರಿ ನೌಕರರಿಗೆ ‘ಶಾಕ್’ ಕೊಟ್ಟ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ‘ಶಾಕ್’ ಕೊಟ್ಟ ಸರ್ಕಾರ

ದೇಶದಲ್ಲಿ ಕಾಣಿಸಿಕೊಂಡಿರುವ ಕರೋನಾ ಮಹಾಮಾರಿ ಕೇವಲ ಜೀವಹಾನಿ ಮಾಡಿರುವುದು ಮಾತ್ರವಲ್ಲ ಆರ್ಥಿಕ ಪರಿಸ್ಥಿತಿಯನ್ನೂ ಹದಗೆಡಿಸಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಸರ್ಕಾರಗಳು ಹಲವು ಕ್ರಮಗಳಿಗೆ ಮುಂದಾಗಿವೆ.

ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ನೌಕರರು ಹಾಗೂ ಪಿಂಚಣಿದಾರರಿಗೆ ಮುಂದಿನ ಒಂದೂವರೆ ವರ್ಷಗಳವರೆಗೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತು ಹಣಕಾಸು ಇಲಾಖೆ ಆದೇಶ ಹೊರಡಿಸಿದ್ದು, ಇದರಿಂದಾಗಿ 2021 ರ ಜೂನ್ ವರೆಗೆ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗುವುದಿಲ್ಲ.

ಇದರ ಜೊತೆಗೆ 2020 ನೇ ಸಾಲಿನ ಅವಧಿಗೆ ಗಳಿಕೆ ರಜೆ ನಗದೀಕರಣ ಪಡೆಯುವ ಸೌಲಭ್ಯವೂ ರದ್ದಾಗಿದೆ. 2020 ರ ಜನವರಿಯಿಂದ ಡಿಸೆಂಬರ್ ನಲ್ಲಿ ನಿವೃತ್ತಿ ಹೊಂದುವ ನೌಕರರು ಮತ್ತು ಅಧಿಕಾರಿಗಳಿಗೆ ಮಾತ್ರ ನಿವೃತ್ತಿ ಹೊಂದುವ ತಿಂಗಳಿಂದ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...