alex Certify ರಾಮಮಂದಿರ ಶಿಲಾನ್ಯಾಸ ಸಂದರ್ಭದಲ್ಲಿರಲಿದೆ ‘ಹಂಪಿ’ಯ ಶಿಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಶಿಲಾನ್ಯಾಸ ಸಂದರ್ಭದಲ್ಲಿರಲಿದೆ ‘ಹಂಪಿ’ಯ ಶಿಲೆ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಶಿಲಾನ್ಯಾಸ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಪಸ್ಥಿತರಿರಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ಶಿಲಾನ್ಯಾಸ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ.

ಶಿಲಾನ್ಯಾಸ ಸಂದರ್ಭದಲ್ಲಿ ಹನುಮ ಹುಟ್ಟಿದ ನಾಡು ಎಂಬ ಪ್ರಸಿದ್ಧಿ ಹೊಂದಿರುವ ಕರ್ನಾಟಕದ ಹಂಪಿಯಿಂದ ಶಿಲೆಯೊಂದನ್ನು ಕಳುಹಿಸಿಕೊಡಲು ಶ್ರೀ ರಾಮಸೇನೆ ಸಿದ್ಧತೆ ನಡೆಸಿದೆ.

ಈ ಶಿಲೆಗೆ ಬೆಳ್ಳಿ ಕವಚ ತೊಡಿಸಿ ಪೂಜೆ ಸಲ್ಲಿಸಿದ ಬಳಿಕ ವಿಜಯಪುರ – ಭಟ್ಕಳ ಮೂಲಕ ಉಡುಪಿಗೆ ಕಳುಹಿಸಿ ಅಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮುಖಾಂತರ ಅಯೋಧ್ಯೆಗೆ ಕಳುಹಿಸಿ ಕೊಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...