alex Certify ರಾಸಲೀಲೆ ಪ್ರಕರಣ: ಯಾರ ಕೈವಾಡವೆಂದು ಬಹಿರಂಗವಾಗಬೇಕು ಎಂದ ಶಾಸಕ ರಾಜುಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಸಲೀಲೆ ಪ್ರಕರಣ: ಯಾರ ಕೈವಾಡವೆಂದು ಬಹಿರಂಗವಾಗಬೇಕು ಎಂದ ಶಾಸಕ ರಾಜುಗೌಡ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ರಾಜುಗೌಡ, ರಮೇಶಣ್ಣನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ನಮ್ಮ ಸಂಬಂಧಿಕರು. ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. ಅವರು ಅಂತಹ ತಪ್ಪು ಮಾಡುವವರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಯಾರದೋ ಒತ್ತಾಯಕ್ಕಾಗಿ ರಾಜೀನಾಮೆ ನೀಡಿಲ್ಲ. ಇದು ಅವರ ವಿರುದ್ಧ ನಡೆದಿರುವ ವ್ಯವಸ್ಥಿತ ಷಡ್ಯಂತ್ರ. ಈ ಬಗ್ಗೆ ತನಿಖೆಯಾಗಬೇಕು ಎಂದರು.

ಸಿದ್ಧರಾಮಯ್ಯ ಬಣಕ್ಕೆ ಮಹತ್ವದ ಸಂದೇಶ ರವಾನಿಸಿದ ಡಿ.ಕೆ. ಶಿವಕುಮಾರ್

ಸಿಡಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಆಗ ಎಲ್ಲಾ ಸತ್ಯ ಹೊರಬರುತ್ತದೆ. ರಷ್ಯಾದಲ್ಲಿ ವಿಡಿಯೋ ಅಪ್ ಲೋಡ್ ಆಗಿದೆ ಅಂದರೆ ಅವರೆಷ್ಟು ಪ್ರಭಾವಿಗಳಿರಬೇಕು. ರಮೇಶಣ್ಣನ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ಇಂದು ಅವರ ಕುಟುಂಬ ಹೊರಗೆ ಬರದ ಪರಿಸ್ಥಿತಿಯಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...