ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಳೆ ವಿಮೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ‘ಅನ್ನದಾತ’ ಆಪ್ ಸಿದ್ಧಪಡಿಸಲಾಗುತ್ತಿದೆ. ಇದರ ಮೂಲಕ ಬೆಳೆ ವಿಮೆ ತಡೆಗಟ್ಟಬಹುದಾಗಿದೆಯಲ್ಲದೆ ಕನಿಷ್ಠ ಬೆಂಬಲ ಬೆಲೆಗೂ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.
ಅಲ್ಲದೆ ‘ರೈತ ಮಿತ್ರ’ರ ನೇಮಕಕ್ಕೆ ಸರ್ಕಾರ ಮುಂದಾಗಿದ್ದು, ಇವರುಗಳು ರೈತರೊಂದಿಗೆ ನೇರ ಸಂಪರ್ಕವಿಟ್ಟುಕೊಳ್ಳುವ ಮೂಲಕ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸಲಿದ್ದಾರೆ. ಅಲ್ಲದೆ ಜಮೀನಿನ ಮಣ್ಣು ಪರೀಕ್ಷೆಯ ಮೂಲಕ ಯಾವ ಬೆಳೆ ಸೂಕ್ತ ಎಂಬುದರ ಮಾಹಿತಿ ನೀಡುವುದರ ಜೊತೆಗೆ ಪ್ರತಿ ಹಂತದಲ್ಲೂ ಸಲಹೆ ನೀಡಲಿದ್ದಾರೆ.
ಜೊತೆಗೆ ‘ಸ್ವಾಭಿಮಾನಿ ರೈತ’ ಹೆಸರಿನಲ್ಲಿ ಚಿಪ್ ಆಧಾರಿತ ಕಿಸಾನ್ ಕ್ರೆಡಿಟ್ ಕಾರ್ಡ್ ಬಿಡುಗಡೆಯಾಗಲಿದ್ದು, ಇದರಲ್ಲಿ ಕೃಷಿಕರ ಸಂಪೂರ್ಣ ಮಾಹಿತಿ ಇರಲಿದೆ. ಅಲ್ಲದೆ ಬೆಳೆ ಪದ್ಧತಿಯಲ್ಲಿ ಬದಲಾವಣೆ ತರಲು ತೀರ್ಮಾನಿಸಲಾಗಿದ್ದು, ಇದು ಕೃಷಿಕರಿಗೆ ಅನುಕೂಲಕರವಾಗಲಿದೆ ಎನ್ನಲಾಗಿದೆ.