alex Certify ವಲಸಿಗ ಸಚಿವರಲ್ಲಿ ಅಸಮಾಧಾನ ಸ್ಫೋಟ; ಸಚಿವ ಸುಧಾಕರ್ ನಿವಾಸದಲ್ಲಿ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸಿಗ ಸಚಿವರಲ್ಲಿ ಅಸಮಾಧಾನ ಸ್ಫೋಟ; ಸಚಿವ ಸುಧಾಕರ್ ನಿವಾಸದಲ್ಲಿ ಸಭೆ

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಕೆಲ ಸಚಿವರ ಖಾತೆ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ವಲಸಿಗ ಸಚಿವರು ಸಭೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತಿದ್ದು, ಈಗಾಗಲೇ ರಾಜಭವನಕ್ಕೆ ಪಟ್ಟಿ ರವಾನಿಸಲಾಗಿದೆ. ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ಸಿಗುವ ಸಾಧ್ಯತೆ ಇದೆ. ಆದರೆ ಎಂಟಿಬಿ ಇಂಧನ ಅಥವಾ ನಗರಾಭಿವೃದ್ಧಿ ಇಲಾಖೆ ಮೇಲೆ ಕಣ್ಣಿಟ್ಟಿದ್ದರು. ಕೆ. ಗೋಪಾಲಯ್ಯ ಅವರಿಗೆ ತೋಟಗಾರಿಕೆ ಹಾಗೂ ಸಕ್ಕರೆ ಖಾತೆ ನೀಡಲಾಗಿದೆ. ಇನ್ನು ಡಾ. ಸುಧಾಕರ್ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಹಿಂಪಡೆದು ಮಾಧುಸ್ವಾಮಿ ಅವರಿಗೆ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ವಲಸಿಗ ಸಚಿವರು ಸಚಿವ ಸುಧಾಕರ್ ಮನೆಯಲ್ಲಿ ಸಭೆ ನಡೆಸಿದ್ದಾರೆ.

ಇನ್ನು ತಮ್ಮ ಖಾತೆ ಬದಲಾವಣೆಯಾಗಲಿದೆ ಎಂಬ ಮಾಹಿತಿ ಬೆನ್ನಲ್ಲೇ ಸಚಿವ ಜೆ.ಸಿ. ಮಾಧುಸ್ವಾಮಿ ಕೂಡ ಅಸಮಾಧಾನಗೊಂಡಿದ್ದು, ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಇನ್ನು ಮಾಧ್ಯಮಗಳಿಗೂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...