ಲಾಕ್ ಡೌನ್ ಕಾರಣದಿಂದಾಗಿ ಜೀವನೋಪಾಯಕ್ಕಾಗಿ ವಲಸೆ ಬಂದ ಕಾರ್ಮಿಕರು ಸಂಕಷ್ಟಕ್ಕೊಳಗಾಗಿದ್ದು, ತಮ್ಮೂರಿಗೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಈ ಕಾರ್ಮಿಕರಿಗೆ ಭರ್ಜರಿ ಬಂಪರ್ ಸುದ್ದಿ ನೀಡಿದೆ.
ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 137 ಬಸ್ ಗಳನ್ನು ವ್ಯವಸ್ಥೆ ಮಾಡಿದ್ದು, ಪ್ರಯಾಣದ ವೇಳೆ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಅವರುಗಳಿಗೆ ಮಾಸ್ಕ್ ಹಾಗೂ ಗ್ಲೌಸ್ ನೀಡಬೇಕೆಂದು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ತುಮಕೂರಿನಲ್ಲಿ 3, ಹಾಸನ 2, ಚಿಕ್ಕಮಗಳೂರು 43, ಮಂಗಳೂರು 50, ಪುತ್ತೂರು 28, ಶಿವಮೊಗ್ಗ 11 ಬಸ್ ಗಳನ್ನು ನಿಯೋಜಿಸಲಾಗಿದ್ದು ಪ್ರತಿ ಬಸ್ ನಲ್ಲಿ 21 ಕಾರ್ಮಿಕರು ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತದೆ.