alex Certify ವಲಸೆ ಕಾರ್ಮಿಕರು ಊರಿಗೆ ಹೋಗುವುದನ್ನು ತಡೆಯಲು ಸರ್ಕಾರದ ಪ್ಲಾನ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರು ಊರಿಗೆ ಹೋಗುವುದನ್ನು ತಡೆಯಲು ಸರ್ಕಾರದ ಪ್ಲಾನ್..?

ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಕಳುಹಿಸಲು ಸರ್ಕಾರ ಅನುಮತಿ ನೀಡಿದ್ದು ಇವರಿಗಾಗಿ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಬಸ್‌ಗಳು ಬೇರೆ ಬೇರೆ ಜಿಲ್ಲೆಗಳಿಗೆ ಸಂಚಾರ ಮಾಡುತ್ತಿವೆ. ಕಾರ್ಮಿಕರು ತಮ್ಮ ತಮ್ಮ ಊರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹೊಸ ತಲೆನೋವು ಪ್ರಾರಂಭವಾಗಿದೆ.

ಹೌದು, ಬೆಂಗಳೂರಿನ ಕೂಲಿ ಕಾರ್ಮಿಕರು ಬೇರೆಡೆಗೆ ಹೋದರೆ ಇಲ್ಲಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಗತಿಯೇನು ಎಂಬುದು ಸರ್ಕಾರದ ಮುಂದಿನ ಸಮಸ್ಯೆ. ಹೀಗಾಗಿ ಇದಕ್ಕೂ ಒಂದು ಪ್ಲಾನ್ ಮಾಡಿದೆ ಸರ್ಕಾರ. ಇವರನ್ನು ತಮ್ಮ ತಮ್ಮ ಊರುಗಳಿಗೆ ಮರಳದಂತೆ ನೋಡಿಕೊಳ್ಳಬೇಕಾಗಿದೆ.

ಇದಕ್ಕಾಗಿ ಆದಷ್ಟೂ ಬೇಗ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಬೆಂಗಳೂರಿನಲ್ಲಿ ಸಿಮೆಂಟ್, ಕಬ್ಬಿಣ, ಟೈಲ್ಸ್ ಇತ್ಯಾದಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ತೀರ್ಮಾನ ಕೈಗೊಳ್ಳಲಾಗಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಕಾಮಗಾರಿ ಪ್ರಾರಂಭವಾದರೆ ವಲಸೆ ಕಾರ್ಮಿಕರು ಇಲ್ಲಿಯೇ ಉಳಿಯುತ್ತಾರೆ ಎಂಬುದು ಸರ್ಕಾರದ ಚಿಂತನೆ. ಈ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...