alex Certify ವಾಹನಕ್ಕೆ ಮರ ಅಡ್ಡಲಾಗಿ ಬಿದ್ದರೂ ಸಕಾಲಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸಿದ ಸಿಬ್ಬಂದಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನಕ್ಕೆ ಮರ ಅಡ್ಡಲಾಗಿ ಬಿದ್ದರೂ ಸಕಾಲಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸಿದ ಸಿಬ್ಬಂದಿ…!

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಪ್ರಥಮ ಆದ್ಯತೆಯನ್ನಾಗಿಸಿದ್ದ ಸರ್ಕಾರ ಅದಕ್ಕೆ ಪೂರಕ ಸಿದ್ಧತೆಗಳನ್ನು ಸಹ ಕೈಗೊಂಡಿತ್ತು.

ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು ಸಿಬ್ಬಂದಿಗಳ ಸಹಕಾರವೂ ಬಹುಮುಖ್ಯ ಕಾರಣವಾಗಿದ್ದು ಇದಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿಯಲ್ಲಿ ನಡೆದ ಘಟನೆ ಉದಾಹರಣೆಯಾಗಿದೆ.

ಶುಕ್ರವಾರ ಬೆಳಗ್ಗೆ ತುಮರಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಂಬಾರಗೋಡ್ಲು ರಸ್ತೆಯಲ್ಲಿ ಮರ ಅಡ್ಡಲಾಗಿ ಬಿದ್ದಿದೆ. ಆದರೆ ಕೂಡಲೇ ವಾಹನದಲ್ಲಿದ್ದ ಮಾರ್ಗಾಧಿಕಾರಿ, ಚಾಲಕ, ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಮರವನ್ನು ತೆರವುಗೊಳಿಸಿ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...