alex Certify ವಿದೇಶದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಬೆಂಗಳೂರಿಗೆ ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಬೆಂಗಳೂರಿಗೆ ಆಗಮನ

ಮೂರನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಲವು ವಿನಾಯಿತಿಗಳನ್ನು ನೀಡಿದ್ದು, ಈ ಪೈಕಿ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆ ತರುವ ವಿಷಯವೂ ಇತ್ತು. ಈಗಾಗಲೇ ಹೊರ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಸಿಲುಕಿರುವವರನ್ನು ತವರಿಗೆ ವಾಪಸ್ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದೆ.

ಇದೀಗ ವಿದೇಶದಲ್ಲಿ ಸಿಲುಕಿರುವವರನ್ನು ವಾಪಾಸ್ ಕರೆತರಲಾಗುತ್ತಿದ್ದು, ಮೊದಲ ಹಂತದಲ್ಲಿ ಲಂಡನ್ ನಲ್ಲಿ ಸಿಲುಕಿದ್ದ 240 ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಈಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ವಿಮಾನ ನಿಲ್ದಾಣದಲ್ಲಿಯೇ ಇವರುಗಳ ಆರೋಗ್ಯ ತಪಾಸಣೆಯನ್ನು ಮಾಡಲಾಗಿದೆ.

ಇದೀಗ ಈ ಪ್ರಯಾಣಿಕರುಗಳನ್ನು ಕ್ವಾರಂಟೈನ್ ಗಾಗಿ ತ್ರಿ ಸ್ಟಾರ್ ಹಾಗೂ ಪಂಚತಾರಾ ಹೋಟೆಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಕ್ವಾರಂಟೈನ್ ಅವಧಿಯ ವಾಸ್ತವ್ಯ ವೆಚ್ಚವನ್ನು ಪ್ರಯಾಣಿಕರುಗಳೇ ಭರಿಸಬೇಕಿದೆ. ಲಂಡನ್ ನಲ್ಲಿ ಸಿಲುಕಿದ್ದ ಕಾಂಗ್ರೆಸ್ ಶಾಸಕಿ ಜಯಮಾಲಾ ಅವರ ಪುತ್ರಿ ಸೌಂದರ್ಯ ಕೂಡ ಇದೇ ವಿಮಾನದಲ್ಲಿ ಮರಳಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...