alex Certify ವಿಧಾನ ಪರಿಷತ್ ನಲ್ಲಿ ಗದ್ದಲ – ಕೋಲಾಹಲ: ಸಭಾಪತಿ ಕುರ್ಚಿಯಿಂದ ಉಪಸಭಾಪತಿಯನ್ನು ಎಳೆದೊಯ್ದ ಕಾಂಗ್ರೆಸ್ ಸದಸ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ನಲ್ಲಿ ಗದ್ದಲ – ಕೋಲಾಹಲ: ಸಭಾಪತಿ ಕುರ್ಚಿಯಿಂದ ಉಪಸಭಾಪತಿಯನ್ನು ಎಳೆದೊಯ್ದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ವಿಶೇಷ ಪರಿಷತ್ ಕಲಾಪ ಇದೀಗ ಕೋಲಾಹಲಕ್ಕೆ ಕಾರಣವಾಗಿದೆ. ಸದನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ಆರಂಭವಾಗಿದೆ.

ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೇ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಉಪಸಭಾಪತಿಯವರನ್ನು ಕುರ್ಚಿ ಯಿಂದ ಎಳೆದೊಯ್ದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ತಪ್ಪಿಸಲು ಮುಂದಾದಾಗ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದಿದೆ.

ಸದನದ ಒಳಗೇ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ತಳ್ಳಾಟದ ವೇಳೆ ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಕೆಳಕ್ಕೆ ಬಿದ್ದ ಘಟನೆಯೂ ನಡೆದಿದೆ. ಒಟ್ಟಾರೆ ವಿಧಾನ ಪರಿಷತ್ ಕಲಾಪ ಇಂದು ರಣರಂಗವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...