alex Certify ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಹೆಚ್ಚಿದ ಒತ್ತಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಹೆಚ್ಚಿದ ಒತ್ತಡ

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ಮಾರ್ಚ್15ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಆಕಾಂಕ್ಷಿಗಳ ಬಿರುಸಿನ ಚಟುವಟಿಕೆ ಆರಂಭವಾಗಿದೆ.

ಫೆಬ್ರವರಿ 25ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 4ರಂದು ನಾಮಪತ್ರ ಸಲ್ಲಿಕೆ, ಮಾರ್ಚ್ 8ರಂದು ನಾಮಪತ್ರ ವಾಪಸಾತಿಗೆ ಕೊನೆಯ ದಿನವಾಗಿದೆ. ಮಾರ್ಚ್15ರಂದು ಮತದಾನ ನಡೆಯಲಿದ್ದು ಅಂದು ಸಂಜೆಯೇ ಫಲಿತಾಂಶ ಹೊರಬೀಳಲಿದೆ.

ಒಂದು ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸುಲಭವಾಗಿ ಗೆಲುವು ಸಾಧಿಸಲಿದ್ದು, ಈ ಚುನಾವಣೆಯಲ್ಲಿ ಆಯ್ಕೆಯಾದವರ ಸದಸ್ಯತ್ವ ಅವಧಿ 2024ರ ಜೂನ್ 24ರವರೆಗೆ ಇರಲಿದೆ.

BIG NEWS: ಮಾ. 4 ರಿಂದ ಬಜೆಟ್ ಅಧಿವೇಶನ, 8 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ

ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ಎಚ್. ವಿಶ್ವನಾಥ್, ನಾಮನಿರ್ದೇಶನ ಕಾರಣಕ್ಕೆ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗುವ ಹಾಗೂ ಈ ಮೂಲಕ ಸಚಿವರಾಗುವ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ಬಿಜೆಪಿ ನಾಯಕರ ಮೇಲೆ ತೀವ್ರ ಒತ್ತಡ ಹೇರುತ್ತಿದ್ದು, ಇದರ ಜೊತೆಗೆ ಬಿಜೆಪಿಯ ಇತರೆ ಮುಖಂಡರು ಸಹ ಈ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...